Thursday, July 27, 2017

ಗೌರಿಬಿದನೂರು ಗೆ ನಾಮಾಕರಣವಾದುದು

ಗೌರಿಬಿದನೂರು ಗೆ ನಾಮಾಕರಣವಾದುದು
------------------------------------------
ನಮ್ಮ ಗೌರಿಬಿದನೂರು ಊರಿಗೆ ಮಹಾಭಾರತದ ಇತಿಹಾಸ ಬಳುವಳಿ ಇದೆ . ಗೌರಿಬಿದನೂರು ಹೆಸರು ಸಾಗಿ ಬಂದ ಹಾದಿ ಈ ರೀತಿ ಇದೆ .
ಮಹಾಭಾರತ ಯುದ್ಧ ಪೂರ್ಣಗೊಂಡ ನಂತರ ... ವಿದುರ ರರು ವ್ಯಾಸರ ಆಜ್ಞೆ ಯಂತೆ ಮೋಕ್ಷ ಹೊಂದಲು ಉತ್ತರಪಿನಾಕಿನಿ ನದಿದಡ ದಲ್ಲಿರುವ ಮ್ಯೇತ್ರಿಯಿ ಋಷಿಗಳ ಬಳಿ ಆಶ್ರಯ ಪಡೆದರು . ಅವರ ಆದೇಶ ಮೇರೆಗೆ ನಾರಾಯಣ ಮಂತ್ರ ಪಟಿಸುತ್ತ ಅಶ್ವತ್ಥ ವೃಕ್ಷ ನೆಟ್ಟು ಪುಜಿಸಿದರು . ನಂತರ ಅಶ್ವತ್ಥ ನಾರಾಯಣ ಸ್ವಾಮಿ ಕೃಪೆ ಇಂದ ಮೋಕ್ಷ ಪಡೆದರು. ಈ ಪವಿತ್ರ ಸ್ಥಳಕ್ಕೆ "ವಿದೂರೂರು"ಎಂದು ಹೆಸರು ಗಳಿಸಿ ಸಾವಿರಾರು ವರ್ಷ ಪ್ರಸಿದ್ದಿ ಪಡೆಯಿತು . ನಂತರ ಕಾಲಕ್ರಮೇಣ ವಿದೂರೂರು ಆಳ್ವಿಕೆಯಲ್ಲಿ ಒಳಪಟ್ಟಿದ್ದ ದಾರಿನಾಯನಕನ ಪಾಳ್ಯದ ಪಾಳೆಗಾರ ತನ್ನ ಕಿರಿ ಮಗಳಾದ ಗೌರಿ ಗೆ ವಿದೂರೂರು ನ್ನು ಬಳುವಳಿಯಾಗಿಕೊಟ್ಟ ನಂತರ.... ಗೌರಿ ವಿದೂರೂರು ನಂತರ " ಗೌರಿಬಿದನೂರು" ಹೆಸರಲ್ಲಿ ಪ್ರಸಿದ್ದಿ ಪಡೆಯಿತು .ನಮ್ಮ ಗೌರಿಬಿದನೂರು ಜನತೆ ಈ ಬರಹ ಇತರರಿಗೆ ತಿಳಿಸಿ ಮತ್ತು share ಮಾಡಿ .

No comments:

Post a Comment